ಸೌತೆಕಾಯಿ ತಿನ್ನಲು ಈ 5 ಕಾರಣಗಳು ಸಾಕು

ಸೌತೆಕಾಯಿ ದಿನನಿತ್ಯ ಸೇವಿಸಿದರೆ ಸಿಗುವ ಪ್ರಯೋಜನಗಳು ಕೆಲವೊಂದು ಕಾಯಿಲೆಗಳ ತಡೆಯಲು ಹಾಗೂ ಅದನ್ನು ನಿವಾರಿಸಲು ಇದು ತುಂಬಾ ಪರಿಣಾಮಕಾರಿ. ಸೌತೆಕಾಯಿಯಲ್ಲಿ ಕಡಿಮೆ ಕ್ಯಾಲರಿ ಹಾಗೂ ಹೀರಿಕೊಳ್ಳುವ ನಾರಿನಾಂಶ ಹೆಚ್ಚಿದ್ದು, ಇದು ತೂಕ ಇಳಿಸುವವರಿಗೆ ತುಂಬಾ ಪರಿಣಾಮಕಾರಿ.ಸೌತೆಕಾಯಿಯಲ್ಲಿ 45 ಕ್ಯಾಲರಿ, 11 ಗ್ರಾಂ ಕಾರ್ಬ್ರೋಹೈಡ್ರೇಟ್ಸ್, 2 ಗ್ರಾಂ ಪ್ರೋಟೀನ್, 2 ಗ್ರಾಂ ನಾರಿನಾಂಶ, ವಿಟಮಿನ್ ಸಿ, ವಿಟಮಿನ್ ಕೆ, ಮೆಗ್ನಿಶಿಯಂ, ಪೊಟಾಶಿಯಂ ಮತ್ತು ಮ್ಯಾಂಗನೀಸ್ ಇದೆ. ಸೌತೆಕಾಯಿ ದಿನನಿತ್ಯ ಸೇವಿಸಿದರೆ ಅದರಿಂದ ಸಿಗುವ ಲಾಭಗಳ ಬಗ್ಗೆ ತಿಳಿಯಿರಿ.

01. ಜೀರ್ಣಕಾರ್ಯಕ್ಕೆ ಮತ್ತು ತೂಕ ಇಳಿಸಲು ಸಹಕಾರಿ:ಸೌತೆಕಾಯಿಯಲ್ಲಿ ಅಧಿಕ ಜಲಾಂಶವಿದ್ದು, ಕಡಿಮೆ ಕ್ಯಾಲರಿಯನ್ನು ಒಳಗೊಂಡಿರುವುದರಿಂದ, ತೂಕ ನಷ್ಟ ವನ್ನು ಹೊಂದಲು ಬಯಸುವವರಿಗೆ ಸೌತೆಕಾಯಿಯು ವರದಾನ ವಾಗಿದೆ. ಸೌತೆಕಾಯಿಗಳನ್ನು ಸೂಪುಗಳಲ್ಲಿ ಮತ್ತು ಸಲಾಡ್ ಗಳಲ್ಲಿ ಬಳಸಿರಿ. ಒಂದು ವೇಳೆ ಸೌತೆಕಾಯಿಯು ನಿಮ್ಮ ಇಷ್ಟದ ತಿನಿಸು ಅಲ್ಲವಾದರೆ, ನೀವು ನೀವು ಸೌತೆಕಾಯಿಯ ತುಣುಕುಗಳನ್ನು ಕಡ್ಡಿಯೊಂದಕ್ಕೆ ಸಿಕ್ಕಿಸಿ, ಅವುಗಳನ್ನು ಕಡಿಮೆ ಕೊಬ್ಬಿನಾಂಶವುಳ್ಳ, ಕೆನೆಯುಳ್ಳ ಮೊಸರಿನಲ್ಲಿ ಅದ್ದಿಯೂ ಸಹ ಸೇವಿಸಬಹುದು.

02.ಮೆದುಳಿಗೆ ಸೌತೆಕಾಯಿ ತುಂಬಾ ಒಳ್ಳೆಯದು :ಸೌತೆಕಾಯಿ ಯಲ್ಲಿ ಉರಿಯೂತ ಶಮನಕಾರಿ ಫ್ಲಾವೊನೊಲ್ ಇದ್ದು, ಇದು ಮೆದುಳಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ನರಕೋಶಗಳ ಸಂರ್ಪಕವನ್ನು ಹೆಚ್ಚಿಸುವುದು. ಇದೇ ಕಾರಣಕ್ಕಾಗಿ ಪ್ರತಿನಿತ್ಯ ಸೌತೆಕಾಯಿ ಸೇವಿಸಿ. ಇದು ಕೇವಲ ನೆನಪಿನ ಶಕ್ತಿಯ ಬಗ್ಗೆ ಕಾಳಜಿ ವಹಿಸುವುದು ಮಾತ್ರವಲ್ಲದೆ ನರಕೋಶಗಳಿಗೆ ವಯಸ್ಸಾಗುವುದುನ್ನು ತಡೆಯುವುದು.

03.ಕೀಲುಗಳ ಆರೋಗ್ಯವನ್ನು ಸುಧಾರಿಸುತ್ತದೆ :ಸೌತೆ ಕಾಯಿಯು ಕೀಲುಗಳ ಆರೋಗ್ಯವನ್ನು ಸುಧಾರಿಸುತ್ತದೆ, ಕೀಲುಗಳ ಮತ್ತು ಸಂದುಗಳ ಬೇನೆಯಿಂದ (ಸಂಧಿವಾತ) ವಿಮುಕ್ತಿಗೊಳಿಸುತ್ತದೆ. ಸೌತೆಕಾಯಿಯು ಸಿಲಿಕಾದ ಒಂದು ಉತ್ತಮ ಮೂಲವಾಗಿರುವುದರಿಂದ, ಇದು ಕೀಲುಗಳ ಅಂಗಾಂಶಗಳನ್ನು ಶಕ್ತಿಯುತಗೊಳಿಸುವುದರ ಮೂಲಕ ಸಂದುಗಳ ಆರೋಗ್ಯವನ್ನು ವೃದ್ಧಿಸುತ್ತದೆ. ಇದರ ರಸವನ್ನು ಕ್ಯಾರೆಟ್ ರಸದೊಂದಿಗೆ ಸೇರಿಸಿ ಸೇವಿಸಿದರೆ, ಅದು ಶರೀರದ ಯುರಿಕ್ ಆಮ್ಲಗಳ ಮಟ್ಟವನ್ನು ತಗ್ಗಿಸುವುದರ ಮೂಲಕ ಸಂದುಗಳು (ಕಾಲುಗಳ) ಮತ್ತು ಕೀಲುಗಳ ಉರಿಯೂತ ಮತ್ತು ನೋವಿನಿಂದ ವಿಮುಕ್ತಿಗೊಳಿಸುತ್ತದೆ.

04.ಮಧುಮೇಹ, ಕೊಲೆಸ್ಟ್ರಾಲ್ ದೂರವಿಡುತ್ತದೆ :ಸೌತೆಕಾಯಿಯು ಮಧುಮೇಹವನ್ನು ಗುಣಪಡಿಸುತ್ತದೆ, ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ, ಮತ್ತು ರಕ್ತ ದೊತ್ತಡವನ್ನು ನಿಯಂತ್ರಿಸುತ್ತದೆ. ಸೌತೆಕಾಯಿಯು, ಮೇದೋಜೀರಕ ಗ್ರಂಥಿಯ ಕೋಶಗಳು ಇನ್ಸುಲಿನ್ ಅನ್ನು ಉತ್ಪಾದಿಸಲು ಅಗತ್ಯವಾದ ಹಾರ್ಮೋನ್ಅನ್ನು ಹೊಂದಿದ್ದು, ಈ ಇನ್ಸುಲಿನ್, ಮಧುಮೇಹ ರೋಗಿ ಗಳಿಗೆ ಲಾಭದಾಯಕವೆಂದು ಜನಜನಿತವಾಗಿದೆ.

05.ನೈಸರ್ಗಿಕ ಉರಿಯೂತ ಗುಣಗಳು :ಸೌತೆ ಕಾಯಿಯಲ್ಲಿ ಇರುವಂತಹ ಶೇ.95ರಷ್ಟು ನೀರಿನಾಂಶವು ದೇಹವನ್ನು ತೇವಾಂಶದಿಂದ ಇಡುತ್ತದೆ. ಇದು ಕೋಶಗಳಿಗೆ ಪೋಷಣೆ ನೀಡುವುದು ಮತ್ತು ಒಳಗಿನ ಕ್ರಿಯೆಗಳಿಗೆ ತುಂಬಾ ನೆರವಾಗುವುದು. ನೋವು ಹಾಗೂ ಸೋಂಕು ನಿವಾರಣೆಗೆ ಸೌತೆಕಾಯಿ ಜ್ಯೂಸ್ ತುಂಬಾ ಪರಿಣಾಮಕಾರಿ. ದೇಹದೊಳಗಡೆ ಉರಿಯೂತ ಉಂಟಾದಾಗ ಸೌತೆಕಾಯಿಯಲ್ಲಿರುವ ಉರಿಯೂತ ಶಮನಕಾರಿ ಗುಣವು ಕಿಣ್ವಗಳನ್ನು ಬಿಡುಗಡೆ ಮಾಡಿ ಉರಿಯೂತ ಕಡಿಮೆ ಮಾಡುವುದು.

Share this Article
Subscribe
Notify of
guest
0 Comments
Inline Feedbacks
View all comments
error:

Join Our

Group