ಹೊಟ್ಟೆಯ ಅಜೀರ್ಣ ಸಮಸ್ಯೆ ನಿವಾರಣೆಗೆ ಮನೆಮದ್ದು;

ಹೊಟ್ಟೆ ನೋವು, ಅಜೀರ್ಣ ಭಾರತದಲ್ಲಿ ಸಾಮಾನ್ಯವಾಗಿ ಎಲ್ಲರೂ ಎದುರಿಸುವ ಸಮಸ್ಯೆ. ಸಮಸ್ಯೆ ಚಿಕ್ಕದೆಂದು ಉದಾಸೀನ ಮಾಡುವಂತಿಲ್ಲ. ಆದರೆ, ಸಮಸ್ಯೆ ಬಗ್ಗೆ ಗೆಳೆಯ/ತಿಯರಲ್ಲೂ ಹೇಳುವಂತಿಲ್ಲ. ಪ್ರತಿಷ್ಠೆ ಪ್ರಶ್ನೆ. ಅಜ್ಜಿ ಹೇಳುವ ಟಿಪ್ಸ್ ಈ ಕಾಲದವರಿಗೆ ರುಚಿಸುವುದಿಲ್ಲ. ಡಾಕ್ಟರ್ ಹತ್ರಾ ಹೋಗಿ ಹಣ ತೆತ್ತು ಬಂದು ತಾತ್ಕಾಲಿಕ ಪರಿಹಾರ ಪಡೆಯುವುದು ತಪ್ಪುತ್ತಿಲ್ಲ. ಹೊಟ್ಟೆ ಉರಿ, ಅಜೀರ್ಣ, ಎದೆ ಉರಿ ಸಮಸ್ಯೆಗೆ ಮನೆಮದ್ದು ಇಲ್ಲಿದೆ. ಟಿಪ್ಸ್:

#ಸಾಕಷ್ಟು ನೀರು ಹಾಗೂ ಮಜ್ಜಿಗೆ ಕುಡಿಯಿರಿ.

#ಸೈಂಧವ ಲವಣ ಮಿಶ್ರಿತ ಬೆಳ್ಳುಳ್ಳಿ ರಸವನ್ನು ಸಿದ್ಧಪಡಿಸಿ, ಏಳೆಂಟು ಚಮಚ ಬಿಸಿ ನೀರಿಗೆ ಅರ್ಧ ಚಮಚದಷ್ಟು ಬೆಳ್ಳುಳ್ಳಿ ರಸ ಸೇರಿಸಿ. ಈ ಮಿಶ್ರಣವನ್ನು ದಿನಕ್ಕೆರಡು ಬಾರಿ ಸೇವಿಸಿ.

#ಒಂದು ದೊಡ್ಡ ಚಮಚದಷ್ಟು ಕೊತ್ತಂಬರಿ ಬೀಜ ಮತ್ತು ಅವರೆಕಾಳಿನಷ್ಟು ಗಾತ್ರದ ಒಣ ಶುಂಠಿ ಸ್ವಲ್ಪ ಜಜ್ಜಿ ಎರಡು ಬಟ್ಟಲು ನೀರಿಗೆ ಹಾಕಿ ಚೆನ್ನಾಗಿ ಕುದಿಸಿ, ಕಷಾಯ ಶೋಧಿಸಿ, ಜೇನುತುಪ್ಪ ಸೇರಿಸಿ ಸೇವಿಸಿ.

*ಮೇಲಿನ ಕಷಾಯಕ್ಕೆ ಜೇನುತುಪ್ಪ ಬದಲು ಕಲ್ಲು ಸಕ್ಕರೆ ಬಳಸಬಹುದು, ಸಕ್ಕರೆ ಬಳಕೆ ಬೇಡ. ಕೊತ್ತಂಬರಿ ಬೀಜ ಪುಡಿಮಾಡಿಟ್ಟುಕೊಂಡರೆ ತಕ್ಷಣಕ್ಕೆ ಕಷಾಯ ತಯಾರಿಸಲು ಅನುಕೂಲವಾಗುತ್ತದೆ.

# ತುಳಸಿ ರಸ, ಬೆಳ್ಳುಳ್ಳಿ ರಸ, ಜೇನುತುಪ್ಪ ಸಮಭಾಗ ತೆಗೆದುಕೊಂಡು ಮಿಶ್ರಣ ತಯಾರಿಸಿ. ಮೂರು ದಿನಗಳಿಗೊಮ್ಮೆ ಒಂದು ಟೀ ಚಮಚದಷ್ಟು ಸೇವಿಸುತ್ತಿದ್ದರೆ ಹೊಟ್ಟೆ ಉರಿ ಕಮ್ಮಿಯಾಗುತ್ತದೆ.

# ಪ್ರತಿದಿನವೂ ಒಂದು ಎಳನೀರು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳಿ. ಇತರೆ ತಂಪು ಪಾನೀಯಗಳನ್ನು ವರ್ಜಿಸಿ.

# ಅಗತ್ಯವಾದಷ್ಟು ಹುರುಳಿಯನ್ನು ನೀರಿನಲ್ಲಿ ಚೆನ್ನಾಗಿ ಬೇಯಿಸಿ, ಕಟ್ಟು ಬಸಿಯಿರಿ. ಒಂದು ಬಟ್ಟಲು ಬಿಸಿ ಕಟ್ಟಿಗೆ ಸ್ವಲ್ಪ ತುಪ್ಪ ಸೇರಿಸಿ, ಸೇವಿಸಿ. ದಿನದಲ್ಲಿ ಎರಡು ಬಾರಿ ಸೇವಿಸಿದರೆ ಹೊಟ್ಟೆ ನೋವು ಪರಿಹಾರವಾಗುವುದು.

# ನಡಿಗೆ, ಜಾಕಿಂಗ್ ಗೆ ಹೋಗುವ ಪದ್ಧತಿ ಇಟ್ಟುಕೊಳ್ಳಿ. ಆದರೆ, ಹೊಟ್ಟೆ ನೋವಿದ್ದಾಗ ಕಷ್ಟಕರ ದೈಹಿಕ ಕಸರತ್ತು ಮಾಡಲು ಯತ್ನಿಸಬೇಡಿ.

# ಹೊಟ್ಟೆಗೆ ಆಗಾಗ ಏನಾದರೂ ಪೋಷಣೆ ಮಾಡುತ್ತಿರಿ. ಖಾಲಿ ಇದ್ದಷ್ಟೂ ಹೆಚ್ಚು ಶಬ್ದ ಮಾಡುತ್ತದೆ. # ಸೇಬು, ಕ್ಯಾರೆಟ್, ಬೀಟ್ ರೂಟ್ ಜ್ಯೂಸ್, ಹುರುಳಿಕಾಯಿ, ನಾರು ಬೇರಿನ ತರಕಾರಿ ಉತ್ತಮ

# ದೇಹಕ್ಕೆ ಅಗತ್ಯಕ್ಕಿಂತ ಹೆಚ್ಚು ಎಚ್ ಸಿಎಲ್ ಒದಗಿಸುವ ಮಸಾಲೆ ಪದಾರ್ಥಗಳನ್ನು ಸೇವಿಸಬೇಡಿ.

#ಹೊಟ್ಟೆ ನೋವು, ಉರಿ ಇದ್ದಾಗ ಕಾಫಿ, ಟೀ, ಆಲ್ಕೋಹಾಲ್, ಕೋಕ್, ಧೂಮಪಾನ ಬಿಟ್ಟು ಬಿಡಿ.

# ಕೊಬ್ಬಿನ ಪದಾರ್ಥಗಳು ಕೆನೆ ಮೊಸರು, ಪೇಡಾ, ಮಾಂಸ ಕೂಡಾ ಸೇವನೆಗೆ ಯೋಗ್ಯವಲ್ಲ

#ಹೆಚ್ಚು ಬಿಗಿ ಉಡುಪುಗಳನ್ನು ಧರಿಸಬೇಡಿ. ರಾತ್ರಿ ಮಲಗುವುದಕ್ಕೂ ಎರಡು ಮೂರು ಗಂಟೆಗಳಿಗೆ ಮುನ್ನ ಆಹಾರ ಸೇವಿಸಿ. ರಾತ್ರಿ ಹೊತ್ತು ಕಾಫಿ, ಚಹಾ ಬೇಡ.

#ನಿಂಬೆನೀರು:ನಿಂಬೆನೀರಿನ ಅಲ್ಕಲೈನ್ ಪರಿಣಾಮದಿಂದಾಗಿ ಹೊಟ್ಟೆಯ ಆ್ಯಸಿಡ್ ನ್ಯೂಟ್ರಲೈಸ್ ಆಗಿ ಜೀರ್ಣಕ್ರಿಯೆ ಸರಾಗಗೊಳ್ಳುತ್ತದೆ. ನಿಂಬೆರಸವನ್ನು ಬಿಸಿನೀರಿನಲ್ಲಿ ಬೆರೆಸಿ ಕುಡಿಯುವುದು ಉತ್ತಮ.

#ಮೆಂತ್ಯ:ಹೊಟ್ಟೆ ಕೆಟ್ಟ ಸೂಚನೆ ಸಿಕ್ಕ ಕೂಡಲೆ ಸ್ವಲ್ಪ ಮೆಂತ್ಯೆಯನ್ನು ನೀರಿನಲ್ಲಿ ಹಾಕಿ 10 ನಿಮಿಷ ಕುದಿಸಿ ಬಳಿಕ ಕುಡಿಯಿರಿ. ಮೆಂತ್ಯೆ ಟೀ ಮಾಡಿಕೊಂಡು ಕೂಡಾ ಕುಡಿಯಬಹುದು. ಇದು ಅಜೀರ್ಣಕ್ಕೆ ರಾಮಬಾಣ.

  • ಗಮನಿಸಿ :ಎದೆ ಉರಿ ಇದ್ದಾಗ ಮಲಗುವುದಕ್ಕಿಂತ ಎದ್ದು ಓಡಾಡಿದರೆ ಉತ್ತಮ. ಹೆಚ್ಚು ಹೊತ್ತಿನಿಂದ ತೊಂದರೆ ಅನುಭವಿಸುತ್ತಿದ್ದರೆ ವೈದ್ಯರನ್ನು ಅವಶ್ಯವಾಗಿ ಕಾಣಿರಿ.
Share this Article
Subscribe
Notify of
guest
0 Comments
Inline Feedbacks
View all comments
error:

Join Our

Group